ADVERTISEMENT

ವ್ಯಕ್ತಿಯನ್ನು ಅಡ್ಡಗಟ್ಟಿ ದರೋಡೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2011, 19:30 IST
Last Updated 20 ಜನವರಿ 2011, 19:30 IST

ಹಿರಿಯೂರು (ಚಿತ್ರದುರ್ಗ ಜಿಲ್ಲೆ): ಗ್ಯಾರೇಜಿನಲ್ಲಿ ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಊರಿಗೆ ಮರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ, ಮೈಮೇಲೆ ಖಾರದ ಪುಡಿ ಎರಚಿ ನಗದು ಹಾಗೂ ಮೊಬೈಲ್ ದೋಚಿರುವ ಘಟನೆ  ತಾಲ್ಲೂಕಿನ ಗೌಡನಹಳ್ಳಿ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ನಡೆದಿದೆ.

ನಗರದ ಗ್ಯಾರೇಜೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುವ ಮಾದೇನಹಳ್ಳಿ ಮುಸ್ಲಿಂ ಕಾಲೊನಿಯ ಜಾಫರ್ (30) ಊರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ಗೌಡನಹಳ್ಳಿ ಅರಣ್ಯ ಪ್ರದೇಶದಲ್ಲಿ ನಾಲ್ವರು ಮುಸುಕುಧಾರಿಗಳು ಇದ್ದಕ್ಕಿದ್ದಂತೆ ಬೈಕಿಗೆ ಅಡ್ಡ ಬಂದು, ಖಾರದ ಪುಡಿಯನ್ನು ಮೈಮೇಲೆ ಎರಚಿ, ರೂ. 8500 ನಗದು ಹಾಗೂ ಮೊಬೈಲ್ ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಆರೋಪಿಗಳ ಸುಳಿವು ಇದುವರೆಗೂ ದೊರೆತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT