ಹೊಸದುರ್ಗ: ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದಲ್ಲಿ ವಿಧವೆ-ವಿಧುರರಿಬ್ಬರ ಅಪರೂಪದ ವಿವಾಹ ಸೋಮವಾರ ನಡೆಯಿತು.
ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಈ ವಿವಾಹ ನಡೆಯಿತು.
ಸುನಿತಾ ಹಾಗೂ ಸದಾಶಿವ ದಾಂಪತ್ಯ ಜೀವನಕ್ಕೆ ಕಾಲಿರಿಸಿದವರು. ಸದಾಶಿವ ಕಾಲೇಜಿನಲ್ಲಿ ಉಪನ್ಯಾಸಕ. ಚಿಕ್ಕ ವಯಸ್ಸಿನಲ್ಲಿಯೇ ಹೆಂಡತಿಯನ್ನು ಕಳೆದುಕೊಂಡಿದ್ದರು.
ತನ್ನ ಎರಡು ಚಿಕ್ಕ ಮಕ್ಕಳ ಜವಾಬ್ದಾರಿ ಹೊರಬೇಕಾದ ಕಾರಣದಿಂದ ಸುನಿತಾ ಅವರನ್ನು ಮದುವೆಯಾಗಿದ್ದಾರೆ.
ಸಾಣೇಹಳ್ಳಿ ಮಠದಲ್ಲಿ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು, ಎರಡು ಕುಟುಂಬದ ಸಂಬಂಧಿಗಳ ಸಮ್ಮುಖದಲ್ಲಿ ವಿವಾಹ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.