ಹೊಳಲ್ಕೆರೆ: ಹೈನುಗಾರಿಕೆ ನಡೆಸುವುದರಿಂದ ಆರ್ಥಿಕವಾಗಿ ಸಬಲರಾಗಬಹುದು ಎಂದು ಚಿತ್ರದುರ್ಗದ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಪ್ರಸನ್ನಕುಮಾರ್ ಹೇಳಿದರು.
ತಾಲ್ಲೂಕಿನ ಈಚಘಟ್ಟದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬುಧವಾರ ನಡೆದ ಹೈನುಗಾರಿಕೆ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಾವಯವ ಗೊಬ್ಬರ ಬಳಕೆ, ತಳಿಸಂವರ್ಧನೆ, ಉತ್ತಮ ಮೇವು, ಕಾಯಿಲೆಗಳು ಮತ್ತು ಪರಿಹಾರ, ಕರುಗಳ ಪಾಲನೆ, ಕೃತಕ ಗರ್ಭಧಾರಣೆ ಕುರಿತು ಮಾಹಿತಿ ನೀಡಿದರು.
ತಾಲ್ಲೂಕು ಪಶು ಇಲಾಖೆ ಸಹಾಯಕ ನಿರ್ದೇಶಕ ರೆಹಮತ್ ಉಲ್ಲಾ ಮಾತನಾಡಿ, ಅಜೋಲ ಬೆಳೆಯುವುದು, ಮೇವು ಕಟಾವು, ಕೊಟ್ಟಿಗೆ ನಿರ್ಮಾಣ, ಸರ್ಕಾರದ ಸಹಾಯಧನಗಳ ಕುರಿತು ಮಾಹಿತಿ ನೀಡಿದರು. ಹೈನುಗಾರಿಕೆ ಮೇಲ್ವಿಚಾರಕ ಮಂಜುನಾಥ, ಉಮೇಶ್, ವರುಣ ಕುಮಾರ್, ಗ್ರಾ.ಪಂ. ಸದಸ್ಯೆ ರಂಗಮ್ಮ ಹಾಜರಿದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.