ADVERTISEMENT

121 ಸಕ್ರಿಯ ಕೋವಿಡ್‌ ಪ್ರಕರಣ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 5:22 IST
Last Updated 15 ಏಪ್ರಿಲ್ 2021, 5:22 IST

ಚಿತ್ರದುರ್ಗ: ಜಿಲ್ಲೆಯಲ್ಲಿ 16 ಜನರಿಗೆ ಕೋವಿಡ್‌ ತಗುಲಿರುವುದು ಬುಧವಾರ ಖಚಿತವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 121ಕ್ಕೆ ತಲುಪಿದೆ.

1,021 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಬುಧವಾರ ಸಂಗ್ರಹಿಸಲಾಗಿತ್ತು. ಚಿತ್ರದುರ್ಗ 7, ಹಿರಿಯೂರು 3 ಹಾಗೂ ಹೊರ ಜಿಲ್ಲೆಯ 6 ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 27 ಜನ ಚೇತರಿಸಿಕೊಂಡಿದ್ದಾರೆ. ಸೋಂಕು ಕಾಣಿಸಿಕೊಂಡ 15,555 ಜನರಲ್ಲಿ 15,364 ಜನ ಗುಣಮುಖರಾಗಿದ್ದಾರೆ. 70 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.