ಮೊಳಕಾಲ್ಮುರು: ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 14.5 ಟನ್ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ತಾಲ್ಲೂಕಿನ ರಾಂಪುರ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಎಸ್ಐ ಗುಡ್ಡಪ್ಪ ನೇತೃತ್ವದ ತಂಡ ಬೆಂಗಳೂರು- ಬಳ್ಳಾರಿ ರಾಜ್ಯಹೆದ್ದಾರಿಯಲ್ಲಿ ತನಿಖೆ ನಡೆಸಿದಾಗ ಅಕ್ರಮ ಸಾಗಣೆ ಬೆಳಕಿಗೆ ಬಂದಿದೆ.
ಸಾಗಣೆ ಮಾಡುತ್ತಿದ್ದ ಲಾರಿ ರಾಂಪುರದ ವೀರಭದ್ರೇಶ್ವರ ಟ್ರೇಡರ್ಸ್ ಮಾಲೀಕ ಚಂದ್ರಶೇಖರ್ ಅವರಿಗೆ ಸೇರಿದ್ದು ಎನ್ನಲಾಗಿದೆ. ತಾಲ್ಲೂಕು ಆಹಾರ ಶೀರಸ್ತೇದಾರ ಉದಯಕುಮಾರ್ ಈ ಕುರಿತು ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.