ADVERTISEMENT

ವಿದ್ಯೆ, ಸಂಸ್ಕಾರ, ಸಂಸ್ಕೃತಿ ಕಲಿಸುವಲ್ಲಿ ಮಠಗಳ ಪಾತ್ರ ದೊಡ್ಡದು

​ಪ್ರಜಾವಾಣಿ ವಾರ್ತೆ
Published 8 ಜನವರಿ 2018, 9:08 IST
Last Updated 8 ಜನವರಿ 2018, 9:08 IST

ಹಿರಿಯೂರು: ಮಕ್ಕಳಿಗೆ ವಿದ್ಯೆ, ಸಂಸ್ಕಾರ, ಸಂಸ್ಕೃತಿ ಕಲಿಸುವಲ್ಲಿ ಮಠಗಳ ಪಾತ್ರ ಬಹು ದೊಡ್ಡದು ಎಂದು ಕಲಬುರ್ಗಿಯ ಮರುಳ ಶಂಕರಮಠದ ಸಿದ್ದಬಸವ ಕಬೀರಸ್ವಾಮಿ ತಿಳಿಸಿದರು.

ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿರುವ ಮಹಾಶಿವಶರಣ ಹರಳಯ್ಯ ಗುರುಪೀಠದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜ್ಞಾನದ ಬೆಳಕು ಕಾರ್ಯಕ್ರಮದ ನೇತೃತ್ವ ವಹಿಸಿ  ಮಾತನಾಡಿದರು.

ಶರಣರ ವಚನಗಳು, ದಾಸರ ಕೀರ್ತನೆಗಳು, ತತ್ವಪದಗಳು ಸಾಮಾಜಿಕ ಪರಿವರ್ತನೆಯಲ್ಲಿ ಗಮನಾರ್ಹ ಪಾತ್ರ ವಹಿಸಿವೆ. ಸುಜ್ಞಾನದಿಂದ ಶಿವನ ಧ್ಯಾನ ಮಾಡಿದಾಗ ಮನಸ್ಸು ಪರಿಶುದ್ಧವಾಗುತ್ತದೆ.  ಮೇಲು–ಕೀಳು ಭಾವನೆಗಳು ತೊಲಗಬೇಕು. ನ್ಯಾಯೋಚಿತವಾದ ಎಲ್ಲ ವೃತ್ತಿಗಳನ್ನು ಗೌರವಿಸಬೇಕು ಎಂದು ಅವರು ಸೂಚಿಸಿದರು.

ADVERTISEMENT

ಗುರುಪೀಠದ ಅಧ್ಯಕ್ಷ ಬಸವ ಹರಳಯ್ಯ ಸ್ವಾಮೀಜಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಲ್ಲಿರುವ ಮೂಢನಂಬಿಕೆ, ಕಂದಾಚಾರ ಹೋಗಲಾಡಿಸಲು ಪ್ರತಿ ತಿಂಗಳು ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸಕ್ಕರ ರಂಗಸ್ವಾಮಿ ಮಾತನಾಡಿದರು. ಲಲಿತಾ ಕೃಷ್ಣಮೂರ್ತಿ, ಮಹಾಸ್ವಾಮಿ, ಗೊಂದಾಳಪ್ಪ, ಭರಂಪುರ ರಂಗಸ್ವಾಮಿ, ಸಿದ್ದೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.