ಚಿಕ್ಕಜಾಜೂರು: ಸಮೀಪದ ಕೊಡಗವಳ್ಳಿಹಟ್ಟಿ ಗ್ರಾಮದಲ್ಲಿ 10 ವರ್ಷಗಳಿಗೊಮ್ಮೆ ನಡೆಯುವ ದೊಡ್ಡ ಮಾರಿಕಾಂಬ ದೇವಿ ಜಾತ್ರೆ ಬುಧವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ಮಂಗಳವಾರ ರಾತ್ರಿ 10ಕ್ಕೆ ದೇವಿಯನ್ನು ಅಲಂಕರಿಸಿ ಗದ್ದುಗೆ ಮೇಲೆ ಪ್ರತಿಷ್ಠಾಪಿಸಲಾಯಿತು. ತಡರಾತ್ರಿಯಲ್ಲಿ ಗ್ರಾಮದ ಸುತ್ತ ಸರಗವನ್ನು ಹಾಕಲಾಯಿತು.
ಜ. 17ರಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಗ್ರಾಮಸ್ಥರಿಂದ ಎಡೆ ಬಿಡಾರವನ್ನು ಸಲ್ಲಿಸುತ್ತಾರೆ. ಜ. 18ರಂದು ಮಧ್ಯಾಹ್ನ 1 ಗಂಟೆಗೆ ಸಕಲ ವಾದ್ಯಗೋಷ್ಠಿಗಳೊಂದಿಗೆ ದೇವಿಗೆ ಪೋತರಾಜರಿಂದ ಗಂಗಾ ಪೂಜೆಯನ್ನು ಸಲ್ಲಿಸಲಾಗುವುದು. ನಂತರ ಗಾವು ಕಾರ್ಯಕ್ರಮ ನಡೆಯಲಿದೆ.
ಜ. 19ರಂದು ರಾತ್ರಿ ನಾಟಕ ಪ್ರದರ್ಶನ ನಡೆಯಲಿದೆ. ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ನಾಟಕ ಪ್ರದರ್ಶನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ಜಾತ್ರೆಯ ಸಮಿತಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.