ADVERTISEMENT

ಪ.ಪಂ. ಕಚೇರಿ ಕಟ್ಟಡಕ್ಕೆ ₹ 9.14 ಕೋಟಿ

ಹೊಳಲ್ಕೆರೆ: ಅಧ್ಯಕ್ಷ ಆರ್.ಎ.ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಾಮಾನ್ಯ ಸಭೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 3:36 IST
Last Updated 5 ಡಿಸೆಂಬರ್ 2020, 3:36 IST
ಹೊಳಲ್ಕೆರೆಯಲ್ಲಿ ಶುಕ್ರವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಶೋಕ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಶಾಸಕ ಎಂ.ಚಂದ್ರಪ್ಪ, ಉಪಾಧ್ಯಕ್ಷ ಕೆ.ಸಿ.ರಮೇಶ್ ಇದ್ದರು.
ಹೊಳಲ್ಕೆರೆಯಲ್ಲಿ ಶುಕ್ರವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಶೋಕ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಶಾಸಕ ಎಂ.ಚಂದ್ರಪ್ಪ, ಉಪಾಧ್ಯಕ್ಷ ಕೆ.ಸಿ.ರಮೇಶ್ ಇದ್ದರು.   

ಹೊಳಲ್ಕೆರೆ: ₹ 9.14 ಕೋಟಿ ವೆಚ್ಚದಲ್ಲಿ ಪಟ್ಟಣ ಪಂಚಾಯಿತಿಯ ನೂತನ ಕಚೇರಿ ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.

ಅಧ್ಯಕ್ಷ ಆರ್.ಎ.ಅಶೋಕ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

‘ಪಟ್ಟಣ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಪಟ್ಟಣದ ಹೃದಯ ಭಾಗದಲ್ಲಿ ಸುಂದರ ಕಟ್ಟಡ ನಿರ್ಮಾಣ ಆಗಲಿದ್ದು, ಸಾರ್ವಜನಿಕ ವಾಹನ ಪಾರ್ಕಿಂಗ್, ವಾಣಿಜ್ಯ ಮಳಿಗೆಗಳು, ಮೀಟಿಂಗ್ ಹಾಲ್ ಸೇರಿ ವಿವಿಧ ಸೌಲಭ್ಯಗಳಿರುತ್ತವೆ. ನನ್ನ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಟ್ಯಾಂಕರ್ ವಾಹನ ಹಾಗೂ ಬೀದಿ ದೀಪಗಳ ನಿರ್ವಹಣೆಗೆ ಏಣಿ ಹೊಂದಿರುವ ಜೀಪ್ ನೀಡಲಾಗುವುದು’ ಎಂದರು.

ADVERTISEMENT

ಪಟ್ಟಣ ಪಂಚಾಯಿತಿ ನೂತನ ಕಚೇರಿ ಕಟ್ಟಡ ನಿರ್ಮಾಣ ಮಂಜೂರಾತಿಗಾಗಿ ತಾಂತ್ರಿಕ ಪ್ರಸ್ತಾವ ಸಲ್ಲಿಸುವುದು, ಪಟ್ಟಣದಲ್ಲಿ ಸುಸ್ಥಿತಿಯಲ್ಲಿರದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡಿಸುವುದು, 9 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ವಹಣೆ ಮಾಡಲು ಹರಾಜು ಮಾಡುವುದು, ನೀರು ಸರಬರಾಜು, ಬೀದಿ ದೀಪ ನಿರ್ವಹಣೆಗೆ ವಾರ್ಷಿಕ ಟೆಂಡರ್ ಕರೆಯಲು ಒಪ್ಪಿಗೆ ಸೂಚಿಸಲಾಯಿತು.

ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಿಸುವುದು, ಹಂದಿಗಳನ್ನು ಪಟ್ಟಣದಿಂದ ಹೊರಗೆ ಸಾಗಿಸುವುದು, ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯಕ್ಕೆ ನಿವೇಶನ ಒದಗಿಸುವುದು, ಅಗತ್ಯ ಇರುವ ಕಡೆ ಅಂಗನವಾಡಿ ಕಟ್ಟಡ ನಿರ್ಮಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಶೋಕ್, ಉಪಾಧ್ಯಕ್ಷ ಕೆ.ಸಿ.ರಮೇಶ್, ಸದಸ್ಯರಾದ ನಾಗರತ್ನಾ ವೇದಮೂರ್ತಿ, ಪಿ.ಆರ್.ಮಲ್ಲಿಕಾರ್ಜುನ, ಡಿ.ಎಸ್.ವಿಜಯ, ಬಿ.ಎಸ್.ರುದ್ರಪ್ಪ, ವಿಜಯಸಿಂಹ ಖಾಟ್ರೋತ್, ಮಮತಾ ಜಯಸಿಂಹ ಖಾಟ್ರೋತ್, ಪಿ.ಎಚ್.ಮುರುಗೇಶ್, ಶಬೀನ ಅಶ್ರಫ್‌ವುಲ್ಲಾ, ಸೈಯದ್ ಸಜೀಲ್, ಸೈಯದ್ ಮನ್ಸೂರ್, ಪೂರ್ಣಿಮಾ ಬಸವರಾಜ್, ಸುಧಾ ಬಸವರಾಜ, ಸವಿತಾ ನರಸಿಂಹ ಖಾಟ್ರೋತ್, ಬಿ.ವಸಂತಾ ರಾಜಪ್ಪ, ಮುಖ್ಯಾಧಿಕಾರಿ ಎ.ವಾಸಿಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.