ADVERTISEMENT

ಬೈಕ್ ಡಿಕ್ಕಿ: ಉಪವಿಭಾಗಾಧಿಕಾರಿ ವಿ.ಪ್ರಸನ್ನಕುಮಾರ್‌ಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 3 ಮೇ 2021, 8:17 IST
Last Updated 3 ಮೇ 2021, 8:17 IST
   

ಚಿತ್ರದುರ್ಗ: ಇಲ್ಲಿನ ತುರುವನೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಉಪವಿಭಾಗಾಧಿಕಾರಿ ವಿ.ಪ್ರಸನ್ನಕುಮಾರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದಾಗ ಈ ಅಪಘಾತ ಸಂಭವಿಸಿದೆ. ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ.

ತುರುವನೂರು ರಸ್ತೆಯಲ್ಲಿ ಪ್ರಸನ್ನಕುಮಾರ್ ಅವರು ಪತ್ನಿಯೊಂದಿಗೆ ವಾಯುವಿಹಾರ ಮಾಡುತ್ತಿದ್ದರು. ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದಿದೆ ಎಂದು ಬಡಾವಣೆ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.