ADVERTISEMENT

ಹೊಳಲ್ಕೆರೆ ತಾಲ್ಲೂಕಿನ ಚೀರನಹಳ್ಳಿ ಗೇಟ್ ಬಳಿ ವಾಹನ ಡಿಕ್ಕಿ: ಕಾನ್ ಸ್ಟೆಬಲ್ ಸಾವು

​ಪ್ರಜಾವಾಣಿ ವಾರ್ತೆ
Published 5 ಮೇ 2019, 10:28 IST
Last Updated 5 ಮೇ 2019, 10:28 IST
   

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಚೀರನಹಳ್ಳಿ ಗೇಟ್ ಬಳಿ ವಾಹನವೊಂದು ಡಿಕ್ಕಿ ಹೊಡೆದು ಪೊಲೀಸ್ ಕಾನ್ ಸ್ಟೆಬಲ್ ಕೆ.ಕೆ.ಆನಂದ್ (33) ಎಂಬುವರು ಮೃತಪಟ್ಟಿದ್ದಾರೆ.

ಕೊಡಗವಳ್ಳಿ ನಿವಾಸಿ ಆನಂದ್ ಅವರು ಶನಿವಾರ ತಡ ರಾತ್ರಿ ಚೀರನಹಳ್ಳಿ ಗೇಟ್ ಸಮೀಪ ನಿಂತಿದ್ದಾಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ವಾಹನ ಪತ್ತೆಯಾಗಿಲ್ಲ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT