ADVERTISEMENT

ಕಾರಿಗೆ ಲಾರಿ ಡಿಕ್ಕಿ: ಸಾಣೇಹಳ್ಳಿ ಸ್ವಾಮೀಜಿ ಪಾರು

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2019, 5:41 IST
Last Updated 2 ಫೆಬ್ರುವರಿ 2019, 5:41 IST
   

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಸಾಸಲು ಗ್ರಾಮದ ಬಳಿ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಚಲಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ.

ಸ್ವಾಮೀಜಿ ಅವರು ಶನಿವಾರ ಬೆಳಿಗ್ಗೆ ಸಿರಿಗೆರೆಯಿಂದಸಾಸಲು ಮಾರ್ಗವಾಗಿಭದ್ರಾವತಿ ಕಡೆ ಕಾರಿನಲ್ಲಿ ಸಾಗುತ್ತಿದ್ದರು. ಸಾಸಲು ರೈಲ್ವೆ ಮೇಲ್ಸೇತುವೆ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಚಿಕ್ಕಜಾಜೂರು ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತ ಭೀಕರವಾಗಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಡಿಕ್ಕಿಯ ರಭಸಕ್ಕೆ ಲಾರಿ ಪಲ್ಟಿಯಾಗಿದೆ. ಸ್ವಾಮೀಜಿ ಸೇರಿದಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ADVERTISEMENT
ಅಪಘಾತದಿಂದ ನುಜ್ಜುಗುಜ್ಜಾಗಿರುವ ಕಾರು
ಉರುಳಿಬಿದ್ದ ಲಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.