ಚಳ್ಳಕೆರೆ: ಇಲ್ಲಿನ ಬಳ್ಳಾರಿ ರಸ್ತೆ ಕೃಷ್ಣನಗರ ತಾಂಡಾದ ಬಳಿ ನಾಯಕನಹಟ್ಟಿ ಮಾರ್ಗವಾಗಿ ಹೋಗುತ್ತಿದ್ದ ಆಮ್ನಿ ವಾಹನಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ವಾಹನ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಬುಧವಾರ ರಾತ್ರಿ ನಡೆದಿದೆ.
ವಾಹನದಲ್ಲಿ ಚಾಲಕ ಮಾತ್ರ ಇದ್ದರು. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ವಾಹನದಿಂದ ಇಳಿದ ಚಾಲಕ ಪ್ರಾಣಾಪಾಯದಿಂದ ಪಾರಾಗಿ ತಲೆ ಮರೆಸಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಅಧಿಕಾರಿಗಳು ಬೆಂಕಿಯನ್ನು ನಂದಿಸಿದರು.
‘ಚಾಲಕ ಮತ್ತು ವಾಹನದ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ’ ಎಂದು ಪಿಎಸ್ಐ ಮಂಜುನಾಥ ಅರ್ಜುನ ಲಿಂಗಾರೆಡ್ಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.