ADVERTISEMENT

ಚಿತ್ರದುರ್ಗ: ಅನೈತಿಕ ಸಂಬಂಧ ಆರೋಪ, ವ್ಯಕ್ತಿ ಕೊಲೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2018, 5:03 IST
Last Updated 17 ನವೆಂಬರ್ 2018, 5:03 IST
   

ಚಿತ್ರದುರ್ಗ:ಚಳ್ಳಕೆರೆ ನಗರಸಭೆ ನೂತನ ಕಟ್ಟಡದ ಕೆಲಸಕ್ಕೆ ಆಂಧ್ರಪ್ರದೇಶದಿಂದ ಬಂದಿರುವ ಕಟ್ಟಡ ಕಾರ್ಮಿಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆ ದುರ್ಗಂಪಲ್ಲಿ ಗ್ರಾಮದ ಚನ್ನಕೃಷ್ಣ (38) ಕೊಲೆಯಾದ ವ್ಯಕ್ತಿ. ಅನೈತಿಕ ಸಂಬಂಧದ ಹಿನ್ನೆಲೆ ಹತ್ಯೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ನಗರಸಭೆ ನೂತನ ಕಟ್ಟಡ ನಿರ್ಮಾಣಕ್ಕೆ ಆಂಧ್ರಪ್ರದೇಶದ ಕಟ್ಟಡ ಕಾರ್ಮಿಕರು ಬಂದಿದ್ದಾರೆ.

ADVERTISEMENT

ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯ ಮೇರೆಗೆ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.