ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂತ್ರಸ್ತರಾಗಿರುವ ಇಬ್ಬರು ಬಾಲಕಿಯರನ್ನು ಚಿತ್ರದುರ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ. ಮೈಸೂರಿನಲ್ಲಿದ್ದ ಮಕ್ಕಳನ್ನು ಭಾನುವಾರ ನಸುಕಿನಲ್ಲಿ ಇಲ್ಲಿಗೆ ಕರೆತರಲಾಗಿದೆ.
ಬಾಲಕಿಯರ ಬಾಲ ಮಂದಿರದಲ್ಲಿ ಆಶ್ರಯ ಪಡೆದ ಮಕ್ಕಳನ್ನು ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇಬ್ಬರು ಮಕ್ಕಳು ಮೈಸೂರಿನ ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರಾಗಿದ್ದರು. ಸಮಿತಿ ಶಿಫಾರಸ್ಸು ಆಧರಿಸಿ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಶನಿವಾರ ಸಂಜೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.