ADVERTISEMENT

ಮೊಳಕಾಲ್ಮುರು: ಅಂಗನವಾಡಿ ಫೆಡರೇಷನ್‌ನಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 2:47 IST
Last Updated 22 ಸೆಪ್ಟೆಂಬರ್ 2020, 2:47 IST
ಮೊಳಕಾಲ್ಮುರಿನಲ್ಲಿ ಸೋಮವಾರ ಅಂಗನವಾಡಿ ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ಮೊಳಕಾಲ್ಮುರಿನಲ್ಲಿ ಸೋಮವಾರ ಅಂಗನವಾಡಿ ಸಿಬ್ಬಂದಿ ಪ್ರತಿಭಟನೆ ನಡೆಸಿದರು.   

ಮೊಳಕಾಲ್ಮುರು: ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಅಂಗನವಾಡಿಗಳನ್ನು ಇನ್ನಷ್ಟು ಬಲಪಡಿಸಬೇಕು ಎಂದುಆಗ್ರಹಿಸಿ ಸೋಮವಾರ ತಾಲ್ಲೂಕು ಅಂಗನವಾಡಿ ಫೆಡರೇಷನ್‌ನಿಂದ ಪ್ರತಿಭಟನೆ ನಡೆಸಲಾಯಿತು.

ಐಸಿಡಿಸಿ ಯೋಜನೆ ಅಡಿಯಲ್ಲಿ ಈ ಕಾರ್ಯವನ್ನು ಕೈಗೊಳ್ಳುವ ಮೂಲಕ ನೆರವಿಗೆ ಬರಬೇಕು. ಈ ಕುರಿತು ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು. ಪಠ್ಯಪುಸ್ತಕಗಳನ್ನು ಸರಬರಾಜು ಮಾಡಬೇಕು. ಮಕ್ಕಳಿಗೆ ಸಮವಸ್ತ್ರ ನೀಡಬೇಕು. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದಾಖಲಾತಿ ಪಡೆಯುವಾಗಅಂಗನವಾಡಿ ಕೇಂದ್ರದ ವರ್ಗಾವಣೆ ಪತ್ರವನ್ನು ಕಡ್ಡಾಯ ಮಾಡಬೇಕು ಎಂದು
ಆಗ್ರಹಿಸಿದರು.

ಈ ಕುರಿತು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

ADVERTISEMENT

ತಹಶೀಲ್ದಾರ್ ಮಲ್ಲಿಕಾರ್ಜುನ್ ಮನವಿ ಸ್ವೀಕರಿಸಿದರು.

ಸಿಪಿಐ ಕಾರ್ಯದರ್ಶಿ ಜಾಫರ್ ಷರೀಫ್, ಅರವಿಂದಾ ಬಾಯಿ, ಗಂಗಮ್ಮ, ನಾಗರತ್ನಮ್ಮ, ಭಾಗ್ಯಮ್ಮ, ಮಹಾದೇವಿ, ರಾಜೇಶ್ವರಿ, ಸುಶೀಲಮ್ಮ, ಪಾಲಮ್ಮಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.