ಹಿರಿಯೂರು: ನಗರದ ದುರ್ಗಮ್ಮ ದೇವಸ್ಥಾನದ ಬಳಿಯ ಮನೆಯೊಂದರ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು₹ 15 ಸಾವಿರ ಮೌಲ್ಯದ 1 ಕೆ.ಜಿ. 5 ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಗುಂಡೂರಾವ್ ಎಂಬುವರ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಅವರನ್ನು ಬಂಧಿಸಿದ್ದು, ಎರಡು ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ಗಾಂಜಾ ಖರೀದಿಗೆ ಬಂದಿದ್ದ ಇಬ್ಬರು ಪರಾರಿಯಾಗಿದ್ದಾರೆ ಎಂದು ಅಬಕಾರಿಇನ್ಸ್ಪೆಕ್ಟರ್ ರಾಘವೇಂದ್ರ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ಎಸ್ಐ ಟಿ. ಕರಿಬಸಪ್ಪ, ಕಾನ್ಸ್ಟೆಬಲ್ಗಳಾದ ಲೋಹಿತ್, ಸತೀಶ್, ಪಾಟೀಲ್, ವೀರಣ್ಣ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.