ಹೊಸದುರ್ಗ: ತಾಲ್ಲೂಕಿನ ಕುಂದೂರು–ಬಾಗೂರು ಗ್ರಾಮಗಳ ಮಧ್ಯದ ರಸ್ತೆ ಪಕ್ಕದಲ್ಲಿ ಮಂಗಳವಾರ ವಿಷ ಕುಡಿಯಲು ಯತ್ನಿಸುತ್ತಿದ್ದ ಯುವತಿಯನ್ನು ಹೊಯ್ಸಳ 112 ವಾಹನದ ಪೊಲೀಸರು ರಕ್ಷಿಸಿದ್ದಾರೆ.
ಪ್ರೀತಿಯ ವಿಷಯಕ್ಕೆ ಮನನೊಂದು ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿಯ 21 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಕ್ರಿಮಿನಾಶಕ ಸೇವಿಸಲು ಮುಂದಾಗಿದ್ದಳು. ಅದನ್ನು ಕಂಡ ಗಸ್ತಿನಲ್ಲಿದ್ದ ಪೊಲೀಸರು ತಕ್ಷಣ ಕ್ರಿಮಿನಾಶಕ ಬಾಟಲಿಯನ್ನು ವಶಕ್ಕೆ ತೆಗೆದುಕೊಂಡರು. ಬಳಿಕ ಮಹಿಳಾ ಪೊಲೀಸ್ ಸಿಬ್ಬಂದಿ ಸಮ್ಮುಖದಲ್ಲಿ ಠಾಣೆಗೆ ಕರೆದುಕೊಂಡು ಹೋದರು.
ಯುವತಿಯ ಪ್ರಾಣ ರಕ್ಷಿಸಿದ 112 ತುರ್ತು ಸೇವೆ ವಾಹನದ ಪೊಲೀಸರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಶ್ಲಾಘಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.