ಮೊಳಕಾಲ್ಮುರು: ತಾಲ್ಲೂಕಿನ ಸಿದ್ದಯ್ಯನಕೋಟೆ ವಿಜಯ ಮಹಾಂತೇಶ್ವರ ಶಾಖಾಮಠದ ಬಸವಲಿಂಗ ಸ್ವಾಮೀಜಿ ಅವರು ‘ಕಾಯಕ ಜ್ಯೋತಿ’ ಪ್ರಶಸ್ತಿಗೆಪಾತ್ರರಾಗಿದ್ದಾರೆ.
ಹೊಸದುರ್ಗದ ಕರ್ನಾಟಕ ರಾಜ್ಯ ವಿಸ್ಮಯ, ಜಾದೂ, ಪವಾಡ ಹಾಗೂ ಮೋಡಿ ಸಂಶೋಧನಾ ವೇದಿಕೆರಾಜ್ಯೋತ್ಸವ ಅಂಗವಾಗಿ ಪ್ರಶಸ್ತಿ ನೀಡಿಗೌರವಿಸಿದೆ. ಮಠದ ಶೈಕ್ಷಣಿಕ, ಸಾಮಾಜಿಕ ಸೇವೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನ.7ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಠದ ಪಿ.ಆರ್. ಕಾಂತರಾಜ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.