ADVERTISEMENT

ಪ್ರತ್ಯೇಕ ಧರ್ಮ ಹೋರಾಟ ಸಾರಥ್ಯ ವಹಿಸಿ: ಶಿವಮೂರ್ತಿ ಮುರುಘಾ ಶರಣರಿಗೆ ಚಂಪಾ ಕೋರಿಕೆ

​ಪ್ರಜಾವಾಣಿ ವಾರ್ತೆ
Published 7 ಮೇ 2019, 19:02 IST
Last Updated 7 ಮೇ 2019, 19:02 IST
ಚಿತ್ರದುರ್ಗದ ಮುರುಘಾ ಮಠದಲ್ಲಿ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಹಾಗೂ ನೀಲಾ ದಂಪತಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುನೈದ್‌ ಸಖಾಫಿ, ಶಿವಮೂರ್ತಿ ಮುರುಘಾ ಶರಣರು, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಉದ್ಯಮಿ ವೆಂಕಟೇಶ್‌ ಲಾಡ್‌, ಬಸವಧರ್ಮ ಪೀಠದ ಮಾತೆ ಗಂಗಾದೇವಿ ಇದ್ದಾರೆ.
ಚಿತ್ರದುರ್ಗದ ಮುರುಘಾ ಮಠದಲ್ಲಿ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಹಾಗೂ ನೀಲಾ ದಂಪತಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುನೈದ್‌ ಸಖಾಫಿ, ಶಿವಮೂರ್ತಿ ಮುರುಘಾ ಶರಣರು, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಉದ್ಯಮಿ ವೆಂಕಟೇಶ್‌ ಲಾಡ್‌, ಬಸವಧರ್ಮ ಪೀಠದ ಮಾತೆ ಗಂಗಾದೇವಿ ಇದ್ದಾರೆ.   

ಚಿತ್ರದುರ್ಗ: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಪಡೆಯಲು ನಡೆಯುತ್ತಿರುವ ಹೋರಾಟದ ನೇತೃತ್ವವನ್ನು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ವಹಿಸಿಕೊಳ್ಳಬೇಕು ಎಂದು ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಮನವಿ ಮಾಡಿದರು.

ಮುರುಘಾ ಮಠ ಪ್ರದಾನ ಮಾಡುವ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಚಂಪಾ ಅವರ ಕೋರಿಕೆಯನ್ನು ಕಂಡು ಮುರುಘಾ ಶರಣರು ಭಾವುಕರಾದರು.

‘ಲಿಂಗಾಯತ ಧರ್ಮ ಸಂವಿಧಾನಬದ್ಧ ಮಾನ್ಯತೆ ಪಡೆಯಬೇಕಿದೆ. ಚಳವಳಿಯನ್ನು ಇನ್ನಷ್ಟು ವ್ಯವಸ್ಥಿತವಾಗಿ ಕಟ್ಟುವ ಅಗತ್ಯವಿದೆ. ರಾಜಕಾರಣಿಗಳು ನಂಬಿಕೆ ಕಳೆದುಕೊಂಡಿರುವುದರಿಂದ ಮುರುಘಾ ಮಠ ಈ ಚಳವಳಿಯ ಸಾರಥ್ಯ ವಹಿಸುವ ಅಗತ್ಯವಿದೆ’ ಎಂದರು.

ADVERTISEMENT

‘ಬಸವಶ್ರೀ ಪ್ರಶಸ್ತಿ ಸ್ವೀಕರಿಸಿದ್ದು ಜೀವನದ ಅತ್ಯಂತ ಸಂತಸದ ಕ್ಷಣ. ಮುರುಘಾ ಶರಣರ ರೂಪದಲ್ಲಿ ಸಾಕ್ಷಾತ್‌ ಬಸವಣ್ಣನವರೇ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ’ ಎಂದು ಅಭಿ‍ಪ್ರಾಯಪಟ್ಟರು.

‘ಎಂ.ಎಂ.ಕಲಬುರ್ಗಿ ನನ್ನ ಸಹಪಾಠಿ. ಒಟ್ಟಿಗೆ ವ್ಯಾಸಂಗ ಮಾಡಿ, ಸಹೋದ್ಯೋಗಿಗಳಾಗಿ ಕೆಲಸ ಮಾಡಿದ್ದೆವು. ಬಸವಣ್ಣನ ವಿಚಾರ ನಂಬಿದ ಕಾರಣಕ್ಕೆ ಅವರ ಹತ್ಯೆ ನಡೆದಿದೆ. ನಂಬಿದ ಧ್ಯೇಯಕ್ಕಾಗಿ ಪ್ರಾಣ ತೆರಬೇಕಾಯಿತು’ ಎಂದು ಗದ್ಗದಿತರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.