ADVERTISEMENT

ಚಿಕ್ಕಜಾಜೂರು| ಉಪಚಾರ ಮಾಡಿಲ್ಲ ಎಂಬ ಕಾರಣಕ್ಕೆ ಪತಿಯಿಂದ ಕಪಾಳಮೋಕ್ಷ: ಪತ್ನಿ ಸಾವು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 6:04 IST
Last Updated 27 ಮಾರ್ಚ್ 2023, 6:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಜಾಜೂರು: ಸರಿಯಾಗಿ ಉಪಚಾರ ಮಾಡಿಲ್ಲ ಎಂಬ ಕಾರಣಕ್ಕೆ ಪತಿ, ಪತ್ನಿ ಜಗಳ ಸಾವಿನಲ್ಲಿ ಅಂತ್ಯಕಂಡಿದೆ.

ಸಮೀಪದ ಬಿ. ದುರ್ಗ ಗ್ರಾಮದ ಸಾಕಮ್ಮ (50) ಮೃತಪಟ್ಟವರು. ಆರೋಪಿ ನಾಗರಾಜಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 24ರಂದು ರಾತ್ರಿ ನಾಗರಾಜಪ್ಪ ಅವರು ಮನೆಗೆ ಬಂದಾಗ ಪತ್ನಿ ಸಾಕಮ್ಮ ಸರಿಯಾಗಿ ಉಪಚರಿಸಲಿಲ್ಲ ಎಂದು ಜಗಳ ತೆಗೆದರು. ಜಗಳ ವಿಕೋಪಕ್ಕೆ ತಿರುಗಿ ನಾಗರಾಜಪ್ಪ ಅವರು ಸಾಕಮ್ಮ ಅವರ ಕಣ್ಣಿಗೆ ಬಲವಾಗಿ ಗುದ್ದಿದ್ದಾರೆ. ಗುದ್ದಿದ ರಭಸಕ್ಕೆ ಅವರು ಆಯ ತಪ್ಪಿ ಕೆಳಗೆ ಬಿದ್ದಾಗ ತಲೆಗೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಸಾಕಮ್ಮ ಅವರ ಪುತ್ರ ಪ್ರವೀಣ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ಪಿಎಸ್ಐ ತಿಪ್ಪೇಸ್ವಾಮಿ ದೂರು ದಾಖಲಿಸಿಕೊಂಡು ಆರೋಪಿ ನಾಗರಾಜಪ್ಪನನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.