ADVERTISEMENT

ಬೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 7 ಮೇ 2022, 3:28 IST
Last Updated 7 ಮೇ 2022, 3:28 IST

ಪರಶುರಾಂಪುರ (ಚಳ್ಳಕೆರೆ): ತಾಲ್ಲೂಕಿನ ಪರಶುರಾಂಪುರದಲ್ಲಿ ಮಳೆ, ಬಿರುಗಾಳಿಗೆ ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಶುಕ್ರವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗ್ರಾಮದ ಮಹಾಂತೇಶ್ (35) ಮೃತರು. ಗುರುವಾರ ರಾತ್ರಿ ಬಿರುಗಾಳಿ ಮತ್ತು ಮಳೆಗೆ ಮನೆ ಬಳಿ ವಿದ್ಯುತ್ ತಂತಿ ಹರಿದು ಬಿದ್ದಿತ್ತು. ಮೃತ ಮಹಾಂತೇಶ್ ಮನೆಯ ಎದುರುಗಡೆಯೇ ತಂತಿ ಹರಿದುಬಿದ್ದಿದ್ದು, ಸರಿಪಡಿಸುವಂತೆ ಬೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಬೆಸ್ಕಾಂನವರು ದುರಸ್ತಿಪಡಿಸಿರಲಿಲ್ಲ.

‘ಬೆಸ್ಕಾಂನವರ ನಿರ್ಲಕ್ಷ್ಯದಿಂದಾಗಿಯೇ ಮಹಾಂತೇಶ್ ಮೃತಪಟ್ಟರು’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ADVERTISEMENT

ಪರಶುರಾಂಪುರ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.