ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಭೀಮನಬಂಡೆ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮಸ್ಕಲ್ ಗ್ರಾಮದ ನರಸಿಂಹರಾಜು (30) ಮೃತ ವ್ಯಕ್ತಿ. ಬೆಂಗಳೂರಿನಲ್ಲಿ ವಾಸವಾಗಿರುವ ನರಸಿಂಹರಾಜು ಸಂಬಂಧಿಕರ ಮದುವೆಗೆ ಊರಿಗೆ ಬಂದಿದ್ದರು. ಗುರುವಾರ ನಸುಕಿನಲ್ಲಿ ಬೆಂಗಳೂರಿಗೆ ಮರಳುವಾಗ ಅಪಘಾತ ಸಂಭವಿಸಿದೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.