ಮೊಳಕಾಲ್ಮುರು:ಬಿಜೆಪಿ ಕಾರ್ಯಕರ್ತರ ಪಕ್ಷ.ವಿಶ್ವದಲ್ಲಿ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷ ಎಂದು ಬಿಂಬಿತವಾಗಿರುವ ಬಿಜೆಪಿಯಲ್ಲಿರುವುದು ‘ದೇಶ ಮೊದಲು ನಂತರ ನಾವು’ ಎಂಬ ಸಿದ್ಧಾಂತ. ಇದಕ್ಕಾಗಿಯೇ ಜನರು ಪಕ್ಷವನ್ನು ಪ್ರೀತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್. ನವೀನ್ ಹೇಳಿದರು.
ಶನಿವಾರ ನಡೆದ ಬಿಜೆಪಿ ಮಂಡಲ ಪ್ರಶಿಕ್ಷಣ ವರ್ಗಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಷ್ಟೀಯ ಭದ್ರತೆ, ಸಾಮಾಜಿಕ ಸಾಮರಸ್ಯ, ಅಂತ್ಯೋದಯ, ರಾಷ್ಟ್ರೀಯತೆ ವಿಷಯಗಳ ಬಗ್ಗೆ ಪಕ್ಷವು ಉನ್ನತ ಹಂತದಿಂದ ಹಿಡಿದು ಬೇರುಮಟ್ಟದ ಕಾರ್ಯಕರ್ತರವರೆಗೂ ತರಬೇತಿ ನೀಡುವುದನ್ನು ನಡೆಸಿಕೊಂಡು ಬಂದಿದೆ. ಈ ಕಾರಣ ಪಕ್ಷವು ಸಿದ್ಧಾಂತಗಳ ಆಧಾರದಲ್ಲಿಮುನ್ನೆಡೆಯುತ್ತಿದೆ ಎಂದು ಹೇಳಿದರು.
ಮಂಡಲಾಧ್ಯಕ್ಷ ಡಾ. ಪಿ.ಎಂ. ಮಂಜುನಾಥ್, ‘ ಮುಂಬರುವ ಗ್ರಾಮ ಪಂಚಾಯಿತಿ, ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷವುಉತ್ತಮ ಸಾಧನೆ ಮಾಡಬೇಕಿದೆ. ಇದಕ್ಕೆ ಕಾರ್ಯಕರ್ತರು ಸಜ್ಜುಗೊಳ್ಳಬೇಕು. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳ ಸಾಧನೆಗಳನ್ನು ಜನರಲ್ಲಿ ಮನವರಿಕೆ ಮಾಡಿಕೊಡಬೇಕು’ ಎಂದು ಸಲಹೆ ನೀಡಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಉಪಾಧ್ಯಕ್ಷ ಜಿಂಕಲು ಬಸವರಾಜ್, ಎಪಿಎಂಸಿ ಅಧ್ಯಕ್ಷ ಶ್ರೀರಾಮರೆಡ್ಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷಟಿ. ಲಕ್ಷ್ಮಣ, ಉಪಾಧ್ಯಕ್ಷೆ ಶುಭಾ ಪೃಥ್ವಿರಾಜ್, ಮುಖಂಡರಾದ ಡಿ.ಎಂ. ಈಶ್ವರಪ್ಪ, ಚಂದ್ರಶೇಖರ ಗೌಡ, ಆರ್.ಜಿ. ಗಂಗಾಧರಪ್ಪ, ಪಟ್ಟಣ ಪಂಚಾಯಿತಿಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.