ಚಿತ್ರದುರ್ಗ: ತಾಲ್ಲೂಕಿನ ದಂಡಿನ ಕುರುಬರಹಟ್ಟಿ ಸಮೀಪ ಶನಿವಾರ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಚಳ್ಳಕೆರೆಯಿಂದ ಚಿತ್ರದುರ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ದಂಡಿನ ಕುರುಬರಹಟ್ಟಿ ಸಮೀಪ ಬರುತ್ತಿದ್ದಂತೆ ಕುರಿಗಳು ಅಡ್ಡ ಬಂದಿವೆ. ಅವುಗಳನ್ನು ಉಳಿಸಲು ಚಾಲಕ ಮುಂದಾದ ಸಂದರ್ಭ ಇದ್ದಕ್ಕಿದ್ದಂತೆ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.
ಪೊಲೀಸರು ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.