ADVERTISEMENT

ದಾಖಲೆ ಇದ್ದರೆ ಬಹಿರಂಗಪಡಿಸಲಿ: ಡಿ.ಕೆ.ಶಿವಕುಮಾರ್‌ಗೆ ಭೈರತಿ ಬಸವರಾಜ ಸವಾಲು

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2020, 8:38 IST
Last Updated 27 ಏಪ್ರಿಲ್ 2020, 8:38 IST
ಭೈರತಿ ಬಸವರಾಜ
ಭೈರತಿ ಬಸವರಾಜ   

ಚಿತ್ರದುರ್ಗ: ಬಡವರ ಅನ್ನಕ್ಕೆ ಕನ್ನ ಹಾಕುವ ಪ್ರಶ್ನೆಯೇ ಇಲ್ಲ. ಡಿ.ಕೆ.ಶಿವಕುಮಾರ್ ಬಳಿ ದಾಖಲೆ ಇದ್ದರೆ ಬಹಿರಂಗಪಡಿಸಲಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಸವಾಲು ಹಾಕಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಆಹಾರ ತಲುಪಿಸುವಲ್ಲಿ ಸರ್ಕಾರ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ. ಕೆಲವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಪಾದರಾಯನಪುರ ಗಲಭೆ ಆರೋಪಿಗಳನ್ನು ಭದ್ರತಾ ದೃಷ್ಟಿಯಿಂದ ರಾಮನಗರಕ್ಕೆ ಸ್ಥಳಾಂತರ ಮಾಡಲಾಗಿತ್ತು. ರಾಮನಗರ ವಾತಾವರಣ ಹಾಳು ಮಾಡುವ ಉದ್ದೇಶ ಸರ್ಕಾರಕ್ಕೆ ಇರಲಿಲ್ಲ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.