ಹಿರಿಯೂರು: ತಾಲ್ಲೂಕಿನ ಬಾಲೇನಹಳ್ಳಿ–ಹರ್ತಿಕೋಟೆ ಬಳಿ ಶನಿವಾರ ಎದುರಿನಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದುಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.
ಚಳ್ಳಕೆರೆ ತಾಲ್ಲೂಕಿನ ಕರಿಕೆರೆ ಗ್ರಾಮದ ನಾಗಮಣಿ (47), ಇವರ ಪುತ್ರ ವೇಣು (25) ಹಾಗೂ ಕಾರು ಚಲಾಯಿಸುತ್ತಿದ್ದ ತಮ್ಮ ಪ್ರಭಾಕರ್ (38) ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡಿರುವ ಪ್ರಭಾಕರ್ ಅವರ ಪತ್ನಿ ವಿಶಾಲಾಕ್ಷಮ್ಮ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿವೈಎಸ್ಪಿ ರೋಷನ್ ಜಮೀರ್ ತಿಳಿಸಿದ್ದಾರೆ.
ಬೆಂಗಳೂರಿನ ಆಸ್ಪತ್ರೆಯಲ್ಲಿದ್ದ ಸಂಬಂಧಿಕರೊಬ್ಬರನ್ನು ನೋಡಲು ಇವರೆಲ್ಲ ಹೋಗುತ್ತಿದ್ದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.