ADVERTISEMENT

ಚಿತ್ರದುರ್ಗ: ಲಾರಿ -ಕಾರು ಡಿಕ್ಕಿ, ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 3:48 IST
Last Updated 7 ಅಕ್ಟೋಬರ್ 2020, 3:48 IST
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು   

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬುರುಜನರೊಪ್ಪ ಗೇಟ್ ಸಮೀಪ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಒಮ್ನಿ ಡಿಕ್ಕಿ ಹೊಡೆದು ಒಬ್ಬರು ಮೃತಪಟ್ಟಿದ್ದಾರೆ.

ಹಾವೇರಿಯ ಸುರೇಶ್ (40) ಮೃತ ವ್ಯಕ್ತಿ. ಗಂಭೀರವಾಗಿ ಗಾಯಗೊಂಡ ಇತರ ಮೂವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಮ್ನಿ ಹಿರಿಯೂರು ಕಡೆಯಿಂದ ಚಿತ್ರದುರ್ಗದತ್ತ ಬರುವಾಗ ಘಟನೆ ಸಂಭವಿಸಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.