ADVERTISEMENT

ಚಿತ್ರದುರ್ಗ | ಲಾರಿಗೆ ಕಾರು ಡಿಕ್ಕಿ: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 15:43 IST
Last Updated 24 ಜುಲೈ 2020, 15:43 IST

ಚಿತ್ರದುರ್ಗ: ತಾಲ್ಲೂಕಿನ ಕ್ಯಾದಿಗೆರೆ ಸಮೀಪದ ಪುಣೆ–ಬೆಂಗಳುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಲಾರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಪುಣೆಯ ಸಂತೋಷ್‌ (40) ಹಾಗೂ ಸಾಯಿ (18) ಮೃತಪಟ್ಟವರು. ಕೈಲಾಶ್‌, ದಾಕ್ಷಾಯಿಣಿ ಹಾಗೂ ರೇಣುಶ್ರೀ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ.

ಎರಡು ದಿನಗಳ ಹಿಂದೆ ಐವರು ತಿರುಪತಿಗೆ ತೆರಳಿದ್ದರು. ತಿಮ್ಮಪ್ಪನ ದರ್ಶನ ಪಡೆದು ಗುರುವಾರ ರಾತ್ರಿ 9ಕ್ಕೆ ಅಲ್ಲಿಂದ ಹೊರಟಿದ್ದರು. ಹೆದ್ದಾರಿಯಲ್ಲಿ ಪುಣೆಯತ್ತ ಮರಳುವಾಗ ಅಪಘಾತ ಸಂಭವಿಸಿದೆ.

ADVERTISEMENT

ಕ್ಯಾದಿಗೆರೆ ಸಮೀಪ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಮುಂಭಾಗದಲ್ಲಿ ಕುಳಿತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಸಮೇತ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.