ಹಿರಿಯೂರು: ತಾಲ್ಲೂಕಿನ ಗುಯಿಲಾಳು ಟೋಲ್ ಬಳಿ ನಿಂತಿದ್ದ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಬೆಳಗಾವಿಯ ರಮೇಶ್ (55) ವಿಶ್ವನಾಥ್ (65) ಸೀಮಾ (45) ಮೃತಪಟ್ಟವರು. ಇವರು ಬೆಂಗಳೂರಿಗೆ ತೆರಳುತ್ತಿದ್ದರು.
ಚಿತ್ರದುರ್ಗ ಕಡೆಯಿಂದ ವೇಗವಾಗಿ ಬಂದ ಕಾರು ಟೋಲ್ ಬಳಿ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಐಮಂಗಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.