ADVERTISEMENT

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 7:47 IST
Last Updated 18 ಆಗಸ್ಟ್ 2020, 7:47 IST

ಹಿರಿಯೂರು: ತಾಲ್ಲೂಕಿನ ಚಳ್ಳಕೆರೆ ರಸ್ತೆಯಲ್ಲಿನ ಗೊಲ್ಲಹಳ್ಳಿ ಸಮೀಪ ಭಾನುವಾರ ರಾತ್ರಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.

ಬೆಂಗಳೂರಿನ ಬನಶಂಕರಿ ಬಡಾವಣೆಯ ರಾಜಶೇಖರ್ (56) ಮತ್ತು ಜನಾರ್ದನ (46) ಮೃತಪಟ್ಟ
ವರು. ಗಂಭೀರವಾಗಿ ಗಾಯಗೊಂಡಿರುವ ರಾಘವೇಂದ್ರ ಎಂಬುವವರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರುತಿಳಿಸಿದ್ದಾರೆ.

ಉಕ್ಕಿನ ವಸ್ತುಗಳನ್ನು ಹೊತ್ತಿದ್ದ ಲಾರಿಯ ಟೈರ್‌ ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ಅಪಘಾತವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.