ADVERTISEMENT

ಮೊಳಕಾಲ್ಮುರು| ಲಾರಿಗೆ ಸರಕು ವಾಹನ ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 5:53 IST
Last Updated 27 ಮಾರ್ಚ್ 2023, 5:53 IST
ಮೊಳಕಾಲ್ಮುರು ತಾಲ್ಲೂಕಿನ ತಮ್ಮೇನಹಳ್ಳಿ ಬಳಿ ಭಾನುವಾರ ಬೆಳಗಿನ ಜಾವ ಅಪಘಾತಕ್ಕೀಡಾಗಿರುವ ಸರಕು ವಾಹನ
ಮೊಳಕಾಲ್ಮುರು ತಾಲ್ಲೂಕಿನ ತಮ್ಮೇನಹಳ್ಳಿ ಬಳಿ ಭಾನುವಾರ ಬೆಳಗಿನ ಜಾವ ಅಪಘಾತಕ್ಕೀಡಾಗಿರುವ ಸರಕು ವಾಹನ   

ಮೊಳಕಾಲ್ಮುರು: ತಾಲ್ಲೂಕಿನ ತಮ್ಮೇನಹಳ್ಳಿ ಬಳಿ 150 ‘ಎ’ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗಿವ ಜಾವ ಸರಕು ವಾಹನವೊಂದು ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸೀಮಾಂಧ್ರದ ರಾಯದುರ್ಗ ತಾಲ್ಲೂಕು ಬೊಮ್ಮನಾಳ್ ಮಂಡಲ ಗೋವಿಂದವಾಡ ಗ್ರಾಮದ ದಾಸರಿ ಕೇಶಪ್ಪ (30) ಮತ್ತು ಯ ವಂಡ್ರಪ್ಪ (64) ಮೃತಪಟ್ಟವರು.

ಕುಮ್ಮರಿ ಸೋಮಣ್ಣ ಗಾಯಗೊಂಡಿದ್ದಾರೆ. ಅವರು ಸರಕು ವಾಹನದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿಯನ್ನು ಮಾರಾಟ ಮಾಡಲು ಹಾವೇರಿ ಜಿಲ್ಲೆ ಬ್ಯಾಡಗಿ ಮಾರುಕಟ್ಟೆಗೆ ಹೋಗುತ್ತಿದ್ದರು.

ADVERTISEMENT

ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.