ADVERTISEMENT

ಡಿ.ವಿ.ಸದಾನಂದ ಗೌಡ ಚೇತರಿಕೆ: ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2021, 10:51 IST
Last Updated 3 ಜನವರಿ 2021, 10:51 IST
ಡಿ.ವಿ.ಸದಾನಂದ ಗೌಡ ಅವರನ್ನು ಬೆಂಗಳೂರಿನ ಹಾಸ್ಟರ್ ಆಸ್ಪತ್ರೆಗೆ ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು.
ಡಿ.ವಿ.ಸದಾನಂದ ಗೌಡ ಅವರನ್ನು ಬೆಂಗಳೂರಿನ ಹಾಸ್ಟರ್ ಆಸ್ಪತ್ರೆಗೆ ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು.   

ಚಿತ್ರದುರ್ಗ: ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಅಸ್ವಸ್ಥರಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಬೆಂಗಳೂರಿನ ಹಾಸ್ಟರ್ ಆಸ್ಪತ್ರೆಗೆ ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು.

ಚಿತ್ರದುರ್ಗದಿಂದ ಬೆಂಗಳೂರು ವರೆಗೆ ಜೀರೋ ಟ್ರಾಫಿಕ್ ನಲ್ಲಿ ಸ್ಥಳಾಂತರ ಮಾಡಲಾಯಿತು. ಸದಾನಂದಗೌಡರು, ಬಸವೇಶ್ವರ ಆಸ್ಪತ್ರೆಯಲ್ಲಿ ಜ್ಯೂಸ್ ಕುಡಿದು ಸಹಜವಾದಂತೆ ಕಂಡುಬಂದರು.

ಏಕಾಏಕಿ ಅಸ್ವಸ್ಥರಾಗಿದ್ದ ಅವರು ಪ್ರಜ್ಞೆ ತಪ್ಪಿದ್ದರು. ತಕ್ಷಣ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆಗೆ ಸ್ಪಂದಿಸಿ, ಚೆನ್ನಾಗಿಯೇ ಮಾತನಾಡಿದರು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳಿಸಲಾಗಿದೆ ಎಂದು ವೈದ್ಯ ಡಾ. ಅಭಿಷೇಕ್ ಮಾಹಿತಿ ನೀಡಿದರು.

ಆಂಬುಲೆನ್ಸ್‌ನಲ್ಲಿ ಸದಾನಂದ ಗೌಡರ ಜತೆಗೆ ಡಾ. ಜಗದೀಶ್ ಕೂಡ ಬೆಂಗಳೂರಿಗೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.