ADVERTISEMENT

ಹಿರಿಯೂರು: ಶಾಸಕ ಟಿ.ರಘುಮೂರ್ತಿ ಕಾರು ಅಪಘಾತ

​ಪ್ರಜಾವಾಣಿ ವಾರ್ತೆ
Published 24 ಮೇ 2022, 17:06 IST
Last Updated 24 ಮೇ 2022, 17:06 IST
   

ಹಿರಿಯೂರು: ತಾಲ್ಲೂಕಿನ ಬಬ್ಬೂರು ಗ್ರಾಮದ ಬಳಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಕಾರು ಅಪಘಾತವಾಗಿದೆ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ.

ಶಾಸಕರು ಮಂಗಳವಾರ ರಾತ್ರಿ ಚಳ್ಳಕೆರೆ ಕಡೆಯಿಂದ ಮಸ್ಕಲ್ ಗೊಲ್ಲರಹಟ್ಟಿಯ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಮಸ್ಕಲ್ ಗ್ರಾಮದಿಂದ ಮದುವೆಗೆ ಹೊರಟಿದ್ದ ಮಹೀಂದ್ರಾ ಜೈಲೋ ಕಾರು ಹಾಗೂ ಶಾಸಕರ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಪಘಾತದಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ಏರ್ ಬ್ಯಾಗ್ ತೆರೆದುಕೊಂಡಿದ್ದು ಶಾಸಕರಿಗೆ ಯಾವುದೇ ಗಾಯಗಳಾಗಿಲ್ಲ. ಎರಡೂ ಕಾರಿನ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.