ಚಿಕ್ಕಜಾಜೂರು: ಆಗಾಗ ಬೀಳುತ್ತಿರುವ ಮಳೆಯಿಂದಾಗಿ ರಾಗಿ ಪೈರಿಗೆ ಜೀವ ಕಳೆ ಬಂದಂತಾಗಿದೆ.
ವಾರಕ್ಕೊಮ್ಮೆ ಹದ ಮಳೆಯಾಗುತ್ತಿದ್ದು, ಬಾಡುತ್ತಿದ್ದ ರಾಗಿ ಪೈರುಗಳಿಗೆ ಜೀವ ಬಂದಂತಾಗಿದೆ. ಶನಿವಾರ ಹಾಗೂ ಭಾನುವಾರ ರಾತ್ರಿ ಮತ್ತೆ ಮಳೆಯಾಗಿರುವುದು ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.
ಚಿಕ್ಕಜಾಜೂರು ಸೇರಿದಂತೆ ಸಮೀಪದ ಚಿಕ್ಕಂದವಾಡಿ, ಅರಸನಘಟ್ಟ, ಹನುಮನಕಟ್ಟೆ ಮೊದಲಾದ ಕಡೆಗಳಲ್ಲಿ ಮಳೆಯಾಗಿದ್ದು, ಜಮೀನು ಹಾಗೂ ರಸ್ತೆಗಳಲ್ಲಿ ನೀರು ನಿಂತಿದೆ.
ಹೋಬಳಿಯ ಕೆಲವು ರೈತರು ಮೇ ತಿಂಗಳಿನಲ್ಲಿ ಬಿತ್ತನೆ ಮಾಡಿದ್ದ ಮೆಕ್ಕೆಜೋಳವನ್ನು ಕೊಯ್ಲು ಮಾಡಿದ್ದರು. ಕಳೆದ ಬುಧವಾರ ಹದ ಮಳೆಯಾಗಿದ್ದರಿಂದ ಕೆಲವು ಕಡೆಗಳಲ್ಲಿ ಕೆರೆಗಳಿಗೆ ನೀರು ಹರಿದು ಬಂದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.