ಚಿಕ್ಕಜಾಜೂರು: ಸಮೀಪದ ಕಲ್ಲವ್ವನಾಗತಿಹಳ್ಳಿ ಗ್ರಾಮದಲ್ಲಿ ಶಾಸಕ ಎಂ. ಚಂದ್ರಪ್ಪ ₹ 3.5 ಕೋಟಿ ವೆಚ್ಚದ ಚೆಕ್ಡ್ಯಾಂ ಹಾಗೂ ಸಿ.ಸಿ.ರಸ್ತೆ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿದರು.
ಗ್ರಾಮಗಳ ವ್ಯಾಪ್ತಿಯಲ್ಲಿನ ಹಳ್ಳಗಳಿಗೆ ಚೆಕ್ಡ್ಯಾಂ ನಿರ್ಮಿಸುವುದರಿಂದ ಸುತ್ತಮುತ್ತಲಿನ ರೈತರ ತೋಟ ಹಾಗೂ ಜಮೀನುಗಳಲ್ಲಿನ ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿ ರೈತರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಮಹಾದೇವಪ್ಪ, ಸದಸ್ಯರಾ ದೇವರಾಜ್, ಪರಮೇಶ್ವರ ನಾಯ್ಕ, ಶಿಕ್ಷಣಾಧಿಕಾರಿ ಬಸವರಾಜಪ್ಪ, ಕೆ.ರಾಜು, ರುದ್ರೇಗೌಡ, ಸಿದ್ದಪ್ಪ, ಕುಮಾರಸ್ವಾಮಿ, ಮಹೇಶ್, ಶಿವಮೂರ್ತಿ, ಸತೀಶ್, ರಾಜು, ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ಗಳಾದ ಆನಂದಪ್ಪ, ನವೀನ್ ಹಾಗೂ ಗ್ರಾಮದ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.