ADVERTISEMENT

ಮೊಳಕಾಲ್ಮುರು ಸಮೀಪ ಬಸ್ - ಕ್ರೂಸರ್ ಡಿಕ್ಕಿ: ಐವರ ಸಾವು

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2020, 3:16 IST
Last Updated 27 ಡಿಸೆಂಬರ್ 2020, 3:16 IST
ಬಸ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿಯಾದ ದೃಶ್ಯ
ಬಸ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿಯಾದ ದೃಶ್ಯ   

ಮೊಳಕಾಲ್ಮುರು (ಚಿತ್ರದುರ್ಗ): ಬಸ್ ಹಾಗೂ ಕ್ರೂಸರ್ ಮಧ್ಯೆ ಮೊಳಕಾಲ್ಮೂರು ತಾಲೂಕಿನ ಬಿಜಿಕೆರೆ ಬಳಿ ಭಾನುವಾರ ಬೆಳಗಿನ ನಡೆದ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ರಾಯಚೂರು ಜಿಲ್ಲೆ ಲಿಂಗಸಗೂರು ತಾಲ್ಲೂಕಿನವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಬಳ್ಳಾರಿಗೆ ದಾಖಲಿಸಲಾಗಿದೆ.

ಬಸ್ ಬೆಂಗಳೂರಿನಿಂದ ಲಿಂಗಸುಗೂರಿಗೆ ಹೋಗುತಿತ್ತು. ಕ್ರೂಸರ್ ನಲ್ಲಿದ್ದ ಕಾರ್ಮಿಕರು ಚುನಾವಣೆಗೆ ಮತದಾನ ಮಾಡಲು ಗ್ರಾಮಗಳಿಗೆ ಬಂದಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.