ಮಳೆ
–ಎ.ಐ ಚಿತ್ರ
ಚಿತ್ರದುರ್ಗ: ಜಿಲ್ಲೆಯಾದ್ಯಂತ ನಿರಂತರವಾಗಿ ಸೋನೆ ಸುರಿಯುತ್ತಿರುವ ಕಾರಣ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿದ್ದಾರೆ.
ಭಾನುವಾರ ಇಡೀ ದಿನ, ರಾತ್ರಿ ಕೂಡ ಮಳೆ ಸುರಿದಿದೆ. ಸೋಮವಾರವೂ ಸೋನೆ ಮುಂದುವರಿದ ಕಾರಣ ರಜೆ ಘೋಷಣೆ ಮಾಡಲಾಗಿದೆ. ಪದವಿ ಪೂರ್ವ, ಪದವಿ ತರಗತಿಗಳು ಎಂದಿನಂತೆ ಮುಂದುವರಿಯಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.