ADVERTISEMENT

ಚಿತ್ರದುರ್ಗ: ಹೆದ್ದಾರಿ ದಾಟುತ್ತಿದ್ದ ಚಿರತೆ ಮರಿಗೆ ವಾಹನ ಡಿಕ್ಕಿ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 6:18 IST
Last Updated 11 ಅಕ್ಟೋಬರ್ 2020, 6:18 IST
ಚಿರತೆ ಮರಿ- ಸಾಂಕೇತಿಕ ಚಿತ್ರ
ಚಿರತೆ ಮರಿ- ಸಾಂಕೇತಿಕ ಚಿತ್ರ   

ಚಿತ್ರದುರ್ಗ: ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಚಿರತೆ ಮರಿಗೆ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ.

ಸುಮಾರು ಎಂಟು ತಿಂಗಳ ಹೆಣ್ಣು ಚಿರತೆ ಶನಿವಾರ ರಾತ್ರಿ ಅಪಘಾತಕ್ಕೆ ಬಲಿಯಾಗಿದೆ. ಮೃತ ಚಿರತೆಯನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಚಿರತೆ ಮರಿಗೆ ಡಿಕ್ಕಿ ಹೊಡೆದ ವಾಹನ ಪತ್ತೆಯಾಗಿಲ್ಲ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.