ADVERTISEMENT

ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಐದನೇ ಸಾವು

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2023, 6:44 IST
Last Updated 4 ಆಗಸ್ಟ್ 2023, 6:44 IST
   

ಚಿತ್ರದುರ್ಗ: ಇಲ್ಲಿನ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾರ್ವತಮ್ಮ (75) ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮೃತಪಟ್ಟಿದ್ದಾರೆ.

ಆ.1 ರಿಂದ ಈ ವರೆಗೆ ಐವರು ಮೃತಪಟ್ಟಿದ್ದು, ಶುಕ್ರವಾರವೇ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಪ್ರಕರಣ ಬೆಳಕಿಗೆ ಬಂದ ನಾಲ್ಕನೇ ದಿನವೂ ಮೂವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಾರ್ಶ್ವವಾಯು ಪೀಡಿತರಾಗಿದ್ದ ಪಾರ್ವತಮ್ಮ ನೀರು ಕುಡಿದು ಅಸ್ವಸ್ಥರಾಗಿದ್ದರು. ಇವರಿಗೆ ಗುರುವಾರ ವಾಂತಿ ಭೇದಿ ಕಾಣಿಸಿಕೊಂಡು ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕುಟುಂಬದ ಎಲ್ಲ ಹತ್ತು ಸದಸ್ಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ADVERTISEMENT

ಕವಾಡಿಗರಹಟ್ಟಿಯ ಮಂಜುಳಾ, ರಘು ಆ.1ರಂದು ಹಾಗೂ ವಡ್ಡರಸಿದ್ಧವ್ವನಹಳ್ಳಿಯ ಪ್ರವೀಣ್ ಆ.2ರಂದು ಮೃತಪಟ್ಟಿದ್ದರು . ಶುಕ್ರವಾರ ನಸುಕಿನಲ್ಲಿ ರುದ್ರಪ್ಪ ಕೊನೆಯುಸಿರೆಳೆದಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.