ಚಿತ್ರದುರ್ಗ: ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ.ಅರುಣ್ ನೇತೃತ್ವದಲ್ಲಿ ನಗರದಲ್ಲಿ ಭಾನುವಾರ ನಡೆಯಿತು.
ನಗರಸಭೆ ಸಿಬ್ಬಂದಿಯೊಂದಿಗೆ ಪೊಲೀಸರು ಭಾನುವಾರ ನಸುಕಿನಲ್ಲಿ ತೆರವು ಕಾರ್ಯಾಚರಣೆ ಆರಂಭಿಸಿದರು. ಸಂತೆಹೊಂಡ, ಮೆದೇಹಳ್ಳಿ ರಸ್ತೆ, ಬಿ.ಡಿ ರಸ್ತೆ, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪ ಒತ್ತುವರಿ ಆಗಿದ್ದ ಪಾದಚಾರಿ ಮಾರ್ಗವನ್ನು ತೆರವುಗೊಳಿಸಲಾಯಿತು.
ಪಾದಚಾರಿ ಮಾರ್ಗದಲ್ಲಿ ತರಕಾರಿ ವ್ಯಾಪಾರ ನಡೆಯುತ್ತಿತ್ತು. ಬೀದಿ ಬದಿ ವ್ಯಾಪಾರಸ್ಥರು ಗೂಡಂಗಡಿ ಇಟ್ಟುಕೊಂಡಿದ್ದರು. ಇದರಿಂದ ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.