ADVERTISEMENT

ಹೊಳಲ್ಕೆರೆ: ಮಾರ್ಚ್ 26ರಂದು ಕಾಂಗ್ರೆಸ್ ತರಬೇತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2024, 14:00 IST
Last Updated 25 ಮಾರ್ಚ್ 2024, 14:00 IST

ಹೊಳಲ್ಕೆರೆ: ಪಟ್ಟಣದ ಗಣಪತಿ ಕಲ್ಯಾಣ ಮಂಟಪದಲ್ಲಿ ಮಾರ್ಚ್ 26ರಂದು ಬೆಳಿಗ್ಗೆ 10ಕ್ಕೆ ತಾಲ್ಲೂಕು ಹಾಗೂ ಭರಮಸಾಗರ ಹೋಬಳಿ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಬೂತ್ ಏಜೆಂಟರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಮಾಜಿ ಸಚಿವ ಎಚ್.ಆಂಜನೇಯ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದು, ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್ ಏಜೆಂಟರು ಕಾರ್ಯಾಗಾರದಲ್ಲಿ ಭಾಗವಹಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ. ಹನುಮಂತಪ್ಪ ಹಾಗೂ ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಪ್ರಕಾಶ್ ಅಳಗವಾಡಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT