ADVERTISEMENT

ಯಶಸ್ವಿ ನಾಯಕ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 16:31 IST
Last Updated 17 ಆಗಸ್ಟ್ 2024, 16:31 IST
ದುರುಗೇಶ್‌ ಪೂಜಾರ್
ದುರುಗೇಶ್‌ ಪೂಜಾರ್   

ಸಿರಿಗೆರೆ: ರಾಜ್ಯ ರಾಜಕಾರಣದಲ್ಲಿ ಯಶಸ್ವಿ ನಾಯಕರಾಗಿರುವ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣದಲ್ಲಿ ರಾಜ್ಯಪಾಲರ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಅದೊಂದು ಷಡ್ಯಂತ್ರವಾಗಿದೆ ಎಂದು ಭರಮಸಾಗರದ ಕಾಂಗ್ರೆಸ್‌ ಮುಖಂಡ ದುರುಗೇಶ್‌ ಪೂಜಾರ್‌ ತಿಳಿಸಿದರು.

ರಾಜ್ಯ ಕಂಡ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಹಾಗೂ ದೇಶದ ಶ್ರೇಷ್ಠ ಅಹಿಂದ ನೇತಾರ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವ ಮಟ್ಟಕ್ಕೆ ಇಳಿದಿದ್ದು ನಿಜಕ್ಕೂ ಅಸಂವಿಧಾನಕ ನಡೆ ಎಂದು ಟೀಕಿಸಿದ್ದಾರೆ.

40 ವರ್ಷಗಳರಾಜಕೀಯ ಬದುಕಿನಲ್ಲಿ ಕಪ್ಪು ಚುಕ್ಕೆ ಇಲ್ಲದಂತೆ ಬದುಕಿನ ಧೀಮಂತ ನಾಯಕ ಸಿದ್ದರಾಮಯ್ಯ. ಅವರ ಯಶಸ್ಸು ಸಹಿಸದ ಕೇಂದ್ರದ ಬಿಜೆಪಿ ಸರ್ಕಾರ ನೀಚತನಕ್ಕೆ ಇಳಿದಿರುವುದು ಖಂಡನೀಯ ಎಂದು ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.