ADVERTISEMENT

ಚಿತ್ರದುರ್ಗ: ಕೋವಿಡ್‌ನಿಂದ ಆಂಜನೇಯ ದಂಪತಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 4 ಮೇ 2021, 5:08 IST
Last Updated 4 ಮೇ 2021, 5:08 IST
ಆಂಜನೇಯ
ಆಂಜನೇಯ   

ಚಿತ್ರದುರ್ಗ: ಕೊರೊನಾ ವೈರಸ್‌ ಸೋಂಕು ತಗುಲಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಎಚ್‌.ಆಂಜನೇಯ ಹಾಗೂ ಪತ್ನಿ ವಿಜಯಾ ಗುಣಮುಖರಾಗಿದ್ದಾರೆ.

ಸೋಮವಾರ ಆಸ್ಪತ್ರೆಯಿಂದ ಮನೆಗೆ ಮರಳಿರುವ ಇವರು, ಇನ್ನೂ ಒಂದು ವಾರ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆ. ವಾರದ ಹಿಂದೆ
ಇವರು ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು.

‘ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಂಡ ತಕ್ಷಣ ಭಯ ಪಡಬೇಡಿ. ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸಿದರೆ ಮನಸ್ಸಿಗೆ ಔಷಧ ಸಿಕ್ಕಂತಾಗುತ್ತದೆ. ವೈದ್ಯರ ಸಲಹೆ ಪಾಲಿಸಿ. ನಮ್ಮ ಸುರಕ್ಷತೆ ನಮ್ಮ ಕೈಯಲ್ಲೇ ಇದೆ. ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸುರಕ್ಷಿತವಾಗಿರಿ’ ಎಂದು ಆಂಜನೇಯ ಅವರು ಸಲಹೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.