ADVERTISEMENT

ಮಹಿಳೆಯೊಂದಿಗೆ ಅಸಭ್ಯ ವರ್ತನೆ: 9 ಆರೋಪಿಗಳ ಬಂಧನ

ಮಹಿಳೆಯರ ಜತೆ ಅಸಭ್ಯ ವರ್ತನೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 15:36 IST
Last Updated 3 ಡಿಸೆಂಬರ್ 2019, 15:36 IST

ಚಿತ್ರದುರ್ಗ: ಸಿದ್ಧ ಉಡುಪು ತಯಾರಿಕಾ ಕಾರ್ಖಾನೆಯಿಂದ ಮನೆಗೆ ಮರಳುತ್ತಿದ್ದ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ 9 ಆರೋಪಿಗಳನ್ನು ಹಿರಿಯೂರು ತಾಲ್ಲೂಕಿನ ಐಮಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಚಳ್ಳಕೆರೆಯ ಚಿತ್ರಯ್ಯನಹಟ್ಟಿಯ ವಿವೇಕಾನಂದ (24), ಜಗದೀಶ (25), ತಿಪ್ಪೇಸ್ವಾಮಿ (26), ಶಿವಕುಮಾರ್‌ (26), ವಿರೂಪಾಕ್ಷ (32), ಬಸವರಾಜ (56), ಸುರೇಶ (21), ಮಾರುತಿ (25) ಹಾಗೂ ಶಿವಣ್ಣ (27) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಹಿರಿಯೂರು ತಾಲ್ಲೂಕಿನ ಹರ್ತಿಕೋಟೆಯ ಮಹಿಳೆಯರು ಕಸ್ತೂರಿ ರಂಗಪ್ಪನಹಳ್ಳಿ ಸಮೀಪದ ಸಿದ್ಧ ಉಡುಪು ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿಕೊಂಡು ಸೋಮವಾರ ಸಂಜೆ ಕ್ರೂಸರ್‌ನಲ್ಲಿ ಊರಿಗೆ ಮರಳುತ್ತಿದ್ದಾಗ ಆರೋಪಿಗಳು ಅಸಭ್ಯವಾಗಿ ವರ್ತಿಸಿದ್ದರು.

ADVERTISEMENT

ಗನ್ನನಾಯಕನಹಳ್ಳಿ ಗೇಟ್‌ ಸಮೀಪ ಮಹಿಳೆಯರು ಪ್ರಯಾಣಿಸುತ್ತಿದ್ದ ವಾಹನವನ್ನು ಆರೋಪಿಗಳು ಅಡ್ಡಹಾಕಿದ್ದಾರೆ. ಮದ್ಯದ ಬಾಟಲಿಗಳನ್ನು ವಾಹನಕ್ಕೆ ಎಸೆದು ಮಹಿಳೆಯರನ್ನು ವಾಹನದಿಂದ ಹೊರಗೆ ಎಳೆದಿದ್ದಾರೆ. ಈ ಸಂಬಂಧ ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.