ಚಳ್ಳಕೆರೆ: ವಾಹನದಲ್ಲಿ ಅಳಡಿಸಿದ್ದ ಸಿಲಿಂಡರ್ ಭಾನುವಾರ ಆಕಸ್ಮಿಕವಾಗಿ ಸ್ಫೋಟಿಸಿದ ಕಾರಣ ಚಿತ್ರದುರ್ಗ ರಸ್ತೆ ವಿಠ್ಠಲನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಶಬ್ಬೀರ್ ಎಂಬುವವರ ಆಮ್ನಿ ವಾಹನ ಬೆಂಕಿಯಲ್ಲಿ ಹೊತ್ತಿ ಉರಿದಿದೆ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು, ವಾಹನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದರು.
ಸ್ಥಳ ಪರಿಶೀಲಿಸಿ ಈ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪಿಎಸ್ಐ ಮಂಜುನಾಥ ಅರ್ಜುನ ಲಿಂಗಾರೆಡ್ಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.