ADVERTISEMENT

ಚಿತ್ರದುರ್ಗ: ಮಾರ್ಕಾಂಡಮುನಿ ಸ್ವಾಮೀಜಿ ನಿಧನ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2021, 5:59 IST
Last Updated 5 ನವೆಂಬರ್ 2021, 5:59 IST
ಕೋಡಿಹಳ್ಳಿಯ ಮಾರ್ಕಾಂಡಮುನಿ ಸ್ವಾಮೀಜಿ
ಕೋಡಿಹಳ್ಳಿಯ ಮಾರ್ಕಾಂಡಮುನಿ ಸ್ವಾಮೀಜಿ   

ಹಿರಿಯೂರು:ತಾಲ್ಲೂಕಿನ ಕೋಡಿಹಳ್ಳಿ ಆದಿಜಾಂಬವ ಮಹಾಸಂಸ್ಥಾನದ ಮಾರ್ಕಾಂಡಮುನಿ ಸ್ವಾಮೀಜಿ (70) ಗುರುವಾರ ಹೃದಯಾಘಾತದಿಂದ ಲಿಂಗೈಕ್ಯರಾದರು.

ಆರೋಗ್ಯದಲ್ಲಿ ಏರುಪೇರು ಕಂಡ ತಕ್ಷಣ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ಭಕ್ತರು ಕರೆ ತಂದರು. ಆಸ್ಪತ್ರೆಗೆ ಬರುವ ವೇಳೆಗೆ ಸ್ವಾಮೀಜಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಮಠದಲ್ಲಿ ಶುಕ್ರವಾರ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಆದಿಜಾಂಬವ ಶಾಖಾ ಮಠದ ಸ್ವಾಮೀಜಿಗಳ ಜೊತೆ ಚರ್ಚಿಸಿ ಮಠದ ಆವರಣದಲ್ಲಿ ಅಂತ್ಯಕ್ರಿಯೆ ಕುರಿತು ನಿರ್ಧರಿಸಲಾಗುವುದು ಎಂದು ಶಿವಮುನಿ ಸ್ವಾಮೀಜಿ ಹಾಗೂ ಷಡಕ್ಷರಮುನಿ ಸ್ವಾಮೀಜಿ ತಿಳಿಸಿದ್ದಾರೆ. ಮಾರ್ಕಾಂಡಮುನಿ ಸ್ವಾಮೀಜಿ ಅವರು ಆದಿಜಾಂಬವ ಸಮಾಜದ ಸಂಘಟನೆಯಲ್ಲಿ ತೊಡಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.