ADVERTISEMENT

ಯಡಿಯೂರಪ್ಪ ಅವರೇ ಧೈರ್ಯವಾಗಿರಿ: ಶಿವಮೂರ್ತಿ ಮುರುಘಾ ಶರಣರ ಅಭಯ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 7:01 IST
Last Updated 29 ನವೆಂಬರ್ 2020, 7:01 IST
ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು   

ಚಿತ್ರದುರ್ಗ: ಬಿ.ಎಸ್.ಯಡಿಯೂರಪ್ಪ ಅವರೇ ನಿಮಗೇನೂ ಆಗದು, ಧೈರ್ಯದಿಂದ ಇರಿ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅಭಯ ನೀಡಿದರು.

ಮುರುಘಾ ಮಠದ ಮುರುಘಾಶ್ರೀ ಮ್ಯೂಸಿಯಂ ಉದ್ಘಾಟನಾ ಸಮಾರಂಭದಲ್ಲಿ ಶರಣರು ಮಾತನಾಡಿದರು.

ಲಿಂಗಾಯತ ವೀರಶೈವರಲ್ಲಿ ಬಡವರು, ಶೋಷಿತರು ಇದ್ದಾರೆ. ಇಂತಹ ಸಮುದಾಯವನ್ನು ಕೇಂದ್ರದ ಹಿಂದುಳಿದ ಜಾತಿ ಪಟ್ಟಿಗೆ ಸೇರಿಸುವ ಶಿಫಾರಸ್ಸು ಮಾಡುವುದಾಗಿ ಹೇಳಿದ್ದು ಸಮುದಾಯದಲ್ಲಿ ಸಂಚಲನ ಉಂಟು ಮಾಡಿದೆ. ಇದೊಂದು ನಿರ್ಧಾರ ಕೇಳಿ ಸಂತಸ ಉಂಟಾಗಿದೆ. ಆ ಕಾರ್ಯವನ್ನು ಯಡಿಯೂರಪ್ಪ ಅವರೇ ಪೂರ್ಣಗೊಳಿಸಬೇಕು. ಬೇರೆ ಯಾರೂ ಈ ಕೆಲಸ ಮಾಡಲು ಸಾಧ್ಯವಿಲ್ಲ. ಇದಕ್ಕಾಗಿ ಮುಖ್ಯಮಂತ್ರಿ ಹುದ್ದೆಯಲ್ಲಿ ಯಡಿಯೂರಪ್ಪ ಮುಂದುವರೆಯಬೇಕಿದೆ ಎಂದರು.

ADVERTISEMENT

ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು ನೀವು ಧೈರ್ಯದಿಂದ ದೆಹಲಿಗೆ ಹೋಗಿ. ನೀವು ಯಾವಾಗಲೂ ಹೀಗೆ ಇರುತ್ತೀರಿ ಎಂದ ಶರಣರು, ಹೌದಲ್ಲವೇ ಎಂದು ವೇದಿಕೆ ಮೇಲಿದ್ದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಕೇಳಿದರು. ಶರಣರ ಅಭಿಪ್ರಾಯಕ್ಕೆ ಇಬ್ಬರು ಸ್ವಾಮೀಜಿಗಳು ಒಪ್ಪಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.