ADVERTISEMENT

ಚುನಾವಣೆ ಮುಂದೂಡಲು ಮನವಿ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 13:53 IST
Last Updated 25 ಏಪ್ರಿಲ್ 2021, 13:53 IST
ಕೆ.ರವಿ ಅಂಬೇಕರ್
ಕೆ.ರವಿ ಅಂಬೇಕರ್   

ಚಿತ್ರದುರ್ಗ: ಕೊರೊನಾ ಸೋಂಕಿನ ಕಾರಣಕ್ಕೆ ಮನೆಯಿಂದ ಹೊರಬರದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ಮುಂದೂಡುವುದು ಸೂಕ್ತ ಎಂದು ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕೆ.ರವಿ ಅಂಬೇಕರ್ ಮನವಿ ಮಾಡಿದ್ದಾರೆ.

ಮತದಾನ ಮೇ 9ಕ್ಕೆ ನಿಗದಿಯಾಗಿದೆ. ಈ ಹೊತ್ತಿಗೆ ಕೊರೊನಾ ಸೋಂಕು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. 45 ವರ್ಷ ಮೇಲ್ಪಟ್ಟವರು ಮತಗಟ್ಟೆಗೆ ಬರುವುದು ಅನುಮಾನ. ಪೂರ್ಣಪ್ರಮಾಣದ ಮತ ಚಲಾವಣೆ ಆಗದಿದ್ದರೆ ಉತ್ತಮ ಅಭ್ಯರ್ಥಿಯ ಆಯ್ಕೆ ಸಾಧ್ಯವಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ಸೋಂಕಿನ ಕಾರಣಕ್ಕೆ ಮತದಾರರನ್ನು ಭೇಟಿಯಾಗಲು ಅಭ್ಯರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಲು ಸಾಧ್ಯವಿದೆಯಾದರೂ ಕೋವಿಡ್‌ ಅಪಾಯ ತಪ್ಪಿದ್ದಲ್ಲ. ಮತದಾರರ ಜೀವಕ್ಕಿಂತ ಚುನಾವಣೆ ದೊಡ್ಡದಲ್ಲ. ಕೋವಿಡ್‌ ಎರಡನೇ ಅಲೆ ಕ್ಷೀಣಿಸುವವರೆಗೆ ಚುನಾವಣೆ ಮುಂದೂಡುವುದು ಸೂಕ್ತ ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.