ಚಿತ್ರದುರ್ಗ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಲ್ಲಿನ ಮುರುಘಾ ಮಠಕ್ಕೆ ಭೇಟಿ ನೀಡಿ ಡಾ.ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದರು.
ಅಮೃತಮಹೋತ್ಸವ ಸಮಾರಂಭ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಅವರು ರಾತ್ರಿ 10.15ಕ್ಕೆ ಮುರುಘಾ ಮಠಕ್ಕೆ ಬಂದರು. ಶರಣರೊಂದಿಗೆ ಕೆಲ ಹೊತ್ತು ಚರ್ಚಿಸಿದರು.
ಮಾಜಿ ಸಚಿವರಾದ ಎಚ್.ಆಂಜನೇಯ, ಎಚ್.ಎಂ.ರೇವಣ್ಣ, ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ, ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.