ADVERTISEMENT

ಚಿತ್ರದುರ್ಗ | ನಕಲಿ ಅಭ್ಯರ್ಥಿ ಪರೀಕ್ಷೆಗೆ ಹಾಜರು: ಬಂಧನ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 17:19 IST
Last Updated 23 ನವೆಂಬರ್ 2020, 17:19 IST

ಚಿತ್ರದುರ್ಗ: ನಗರದಲ್ಲಿ ಭಾನುವಾರ ನಡೆದ ಕೆಎಸ್‌ಆರ್‌ಪಿ, ಐಆರ್‌ಬಿ ಕಾನ್‌ಸ್ಟೆಬಲ್‌ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ನೈಜ ಅಭ್ಯರ್ಥಿ ಬದಲಿಗೆ ಪರೀಕ್ಷೆಗೆ ಹಾಜರಾಗಿದ್ದ ನಕಲಿ ಅಭ್ಯರ್ಥಿಯನ್ನು ನಗರದ ಪೊಲೀಸರು ಬಂಧಿಸಿದ್ದಾರೆ.

‘ಬೆಳಗಾವಿ ಜಿಲ್ಲೆ ಗೋಕಾಕ ತಾಲ್ಲೂಕಿನ ಮರಡಿ ಶಿವಪುರ ಗ್ರಾಮದ ಸಿದ್ಧಾರೂಢ ಮಲ್ಲಪ್ಪ ಒಡೆಯರ್ (26) ಬಂಧಿತ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದ್ದಾರೆ.

‘ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಬಸವರಾಜ ಸಿದ್ದಪ್ಪ ಚೆನ್ನಪ್ಪ ಗೋಳ್ ಎಂಬುವರ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಪರೀಕ್ಷೆಯಲ್ಲಿ ನಡೆದಿರುವ ಈ ಅಕ್ರಮದ ಕುರಿತು ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.